- Advertisement -
- Advertisement -





ಕುಂಡಡ್ಕ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪಿಲಿಪ್ಪೆ, ವಿಷ್ಣುನಗರದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವವು ಫೆಬ್ರವರಿ 12 ಮತ್ತು 13 ರಂದು ನಡೆಯಲಿದ್ದು, ಇದರ ಗೊನೆ ಮುಹೂರ್ತ ಕಾರ್ಯಕ್ರಮ ದಿನಾಂಕ 05-02-2025 ನೇ ಬುಧವಾರ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಗಣೇಶ್ ಭಟ್ ಪ್ರಾರ್ಥನೆ ಸಲ್ಲಿಸಿ ಗೊನೆಮುಹೂರ್ತ ನೆರವೇರಿಸಿದರು.


ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಕುಳ- ವಿಟ್ಲಮುಡ್ನೂರು ಗ್ರಾಮಸ್ಥರು ಉಪಸ್ಥಿತರಿದ್ದರು.

- Advertisement -








