Sunday, May 5, 2024
spot_imgspot_img
spot_imgspot_img

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ

- Advertisement -G L Acharya panikkar
- Advertisement -

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಇದರ ವಾರ್ಷಿಕೋತ್ಸವದ ಪ್ರಯುಕ್ತ ಭಜನೋತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜ.28 ರಂದು ಆದಿತ್ಯವಾರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳಗ್ಗೆ ಗಂಟೆ 6:00ರಿಂದ ಸಂಜೆ 7:00 ತನಕ ವಿವಿಧ ಭಜನಾ ತಂಡದಿಂದ ಭಜನೋತ್ಸವ ಕಾರ್ಯಕ್ರಮ ನಡೆಯಿತು. ಭಜನೋತ್ಸವದ ಉದ್ಘಾಟನೆ ನ್ನು ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಮರುವಾಳ ನಡೆಸಿದರು. ದೇವಸ್ಥಾನದ ಅರ್ಚಕರು, ಯುವಕವೃಂದದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ನಂತರ ಅನ್ನಪ್ರಸಾದ ನಡೆಯಿತು.

- Advertisement -

Related news

error: Content is protected !!