ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ (ವಿಷ್ಣುನಗರ)ಇಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ಜಾತ್ರಾ ಮಹೋತ್ಸವವು ಫೆ.13, 14 ರಂದು ಸಂಪ್ರದಾಯದಂತೆ ನಡೆಯಲಿದೆ.
ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.6ರಂದು ಬೆಳಿಗ್ಗೆ ಗೊನೆ ಕಡಿಯುವ ಕಾರ್ಯಕ್ರಮ ನಡೆಯಲಿದೆ.
ಫೆ.13 ರಂದು ಬೆಳಿಗ್ಗೆ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಮೂಲಸ್ಥಳ ಕುಂಡಡ್ಕ ಬದಿಕೆರೆಯಿಂದ ಕಲಶ ತರುವುದು. ನಂತರ ಕಂಪ ಬನತ್ತಡಿ ಶ್ರೀ ನಾಗದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ಹಾಲು ಅಭಿಷೇಕ, ತಂಬಿಲ ಮತ್ತು ಆಶ್ಲೇಷ ಬಲಿ ನಡೆಯಲಿರುವುದು. ಬಳಿಕ ನವಕ ಪ್ರಧಾನ ಕಲಶ, ಗಣಪತಿ ಹೋಮ ಮಾತೆಯರಿಂದ ಕುಂಕುಮಾರ್ಚನೆ ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಶ್ರೀ ದುರ್ಗಾಪೂಜೆ ನಡೆದು ಬಳಿಕ ನಿತ್ಯಪೂಜೆ, ಶ್ರೀ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಶ್ರೀ ದೇವರ ಬಲಿ ಉತ್ಸವ, ಕಟ್ಟೆಪೂಜೆ ನಡೆಯಲಿದೆ.
ಸಂಜೆ ಗಂಟೆ 6 ರಿಂದ ಶ್ರೀ ಅಮೃತೇಶ್ವರ ಯಕ್ಷಗಾನ ಪ್ರತಿಷ್ಠಾನ(ರಿ.) ವಾಮಂಜೂರು-ಇವರಿಂದ ಯಕ್ಷಗಾನ ಬಯಲಾಟ ಪ್ರಸಂಗ “ಸುದರ್ಶನ ವಿಜಯ, ಭಾರ್ಗವ ವಿಜಯ” ನಡೆಯಲಿದೆ.
ಫೆ.14ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಉತ್ಸವ, ಬಳಿಕ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ಮಧ್ಯಾಹ್ನ ಮಹಾಮಂಗಳಾರತಿ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ.
ದಿನಾಂಕ 10-2-2024ನೇ ಶನಿವಾರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೇವರುಗಳ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ.
ಬೆಳಿಗ್ಗೆ ಸ್ಥಳ ಶುದ್ಧಿ, 12 ಕಾಯಿ ಗಣಪತಿ ಹವನ, ನವಕ, ಪ್ರಧಾನ ಕಲಶ, ಪವಮಾನ ಅಭಿಷೇಕ, ಪಂಚಾಮೃತ ಅಭಿಷೇಕ, ತುಳಸಿ ಅರ್ಚನೆ ಸಹಿತ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಶ್ರೀ ರಂಗಪೂಜೆ ನಡೆಯಲಿದೆ.
ಫೆ. 25ರಂದು ಜೈನರಕೋಡಿಯಿಂದ ಭಂಡಾರ ಬಂದು ಪರಿವಾರ ದೈವಗಳಿಗೆ-ಬನದಲ್ಲಿ ಕಾಲಾವಧಿ ನೇಮೋತ್ಸವ ನಡೆಯಲಿದೆ.
ಫೆ. 26ರಂದು ರಾತ್ರಿ ಶಿಬರಿಕಲ್ಲ ಮಾಡದಲ್ಲಿ ಮೂವರ್ ದೈವಂಗಳ ಕಾಲಾವಧಿ ನೇಮೋತ್ಸವ ನಡೆಯಲಿದೆ.
ಫೆ. 27ರಂದು ಬೆಳಿಗ್ಗೆ ಶ್ರೀ ಮಲರಾಯ ದೈವಕ್ಕೆ ಮತ್ತು ಪಿಲಿಚಾಮುಂಡಿ ದೈವಗಳಿಗೆ ಕಾಲಾವಧಿ ನೇಮೋತ್ಸವ ನಡೆಯಲಿದೆ.