Sunday, June 29, 2025
spot_imgspot_img
spot_imgspot_img

ಕುಂದಾಪುರ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಸಾವು..!

- Advertisement -
- Advertisement -

ಕುಂದಾಪುರ: ಪುಣೆಯಿಂದ ಕುಂದಾಪುರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ಉದ್ಯಮಿ, ಸಮಾಜ ಸೇವಕ ಪ್ರಶಾಂತ್ ಶೆಟ್ಟಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ.

ಮೃಪಟ್ಟವರನ್ನು ಸಿದ್ದಾಪುರ ಸಮೀಪದ ಉಳ್ಳೂರು-74 ಗ್ರಾಮದ ನೂಜಿನಬೈಲು ನಿವಾಸಿ, ಪ್ರಶಾಂತ್‌ ಶೆಟ್ಟಿ(50) ಎಂದು ಗುರುತಿಸಲಾಗಿದೆ.

ಹೊನ್ನಾವರ ತಲುಪಿದ ಪ್ರಶಾಂತ್, ತೀವ್ರ ಎದೆನೋವು ಎಂದು ಬಸ್ ಕಂಡಕ್ಟರ್‌ಗೆ ತಿಳಿಸಿದರು. ಕೂಡಲೇ ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದುರದೃಷ್ಟವಶಾತ್ ಅವರು ಸ್ವಲ್ಪ ಸಮಯದ ನಂತರ ಮೃತಪಟ್ಟರು.

ಪ್ರಶಾಂತ್ ಹಲವು ವರ್ಷಗಳಿಂದ ಪುಣೆಯಲ್ಲಿ ಹೋಟೆಲ್ ನಡೆಸಿದ್ದರು. ನಂತರ, ಅವರು ಬಾಬಾಸ್ ಕಿಚನ್ ಅನ್ನು ಸ್ಥಾಪಿಸಿದರು. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ, ಅವರು ಸಿದ್ದಾಪುರದಲ್ಲಿ ಶ್ಯಾಮಲಾ ಪ್ಯಾಲೇಸ್ ಮದುವೆ ಮಂಟಪ ಮತ್ತು ಪ್ರಶ್ವಿನ್ ಇನ್ ಲಾಡ್ಜ್ ಅನ್ನು ಸ್ಥಾಪಿಸಿದರು. ಮುಂಬಯಿ ಬಂಟರ ಸಂಘದ ಪದಾಧಿಕಾರಿಯಾಗಿ ಹಾಗೂ ಕುಂದಾಪುರ ಯುವ ಬಂಟರ ಸಂಘ ಹಾಗೂ ಸಿದ್ದಾಪುರ ಯಕ್ಷ ನುಡಿಸಿರಿಯ ಪೋಷಕರಾಗಿ ಸೇವೆ ಸಲ್ಲಿಸಿದ್ದರು.

- Advertisement -

Related news

error: Content is protected !!