Sunday, June 29, 2025
spot_imgspot_img
spot_imgspot_img

ಕುಂದಾಪುರ: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತಸಿ, ಕಿರುಕುಳ ನೀಡಿದ ಮುಸ್ಲಿಂ ಯುವಕ; ಚಪ್ಪಲಿಯೇಟು ನೀಡಿದ ವಿದ್ಯಾರ್ಥಿನಿ

- Advertisement -
- Advertisement -
vtv vitla

ಕುಂದಾಪುರ: ಕಾಲೇಜಿಗೆ ತೆರಳುತ್ತಿದ್ದಾಗ ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಮುಸ್ಲಿಂ ಯುವಕನಿಗೆ ವಿದ್ಯಾರ್ಥಿನಿ ಸೇರಿ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ತಾಲೂಕಿನ ವಕ್ವಾಡಿ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಬಾರ್ಕೂರು ಮೂಲದ ಭಾಗದಲ್ಲಿ ಶಾಮಿಯಾನ ಮೊದಲಾದ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವ ನಜೀರ್ (35) ಆರೋಪಿ.

ವಿದ್ಯಾರ್ಥಿನಿಯೋರ್ವಳು ಬೀಜಾಡಿ-ವಕ್ವಾಡಿ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಿಂದ ಬೆಳಿಗ್ಗೆ ಕಾಲೇಜಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಆರೋಪಿ ನಜೀರ್ ಆಕೆಗೆ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದು ಆಕೆ ಕೂಗಿಕೊಂಡಿದ್ದಾಳೆ. ಕೂಡಲೇ ಸ್ಥಳೀಯರು ಆಗಮಿಸಿ ಆರೋಪಿಯನ್ನು ಹಿಡಿದುಕೊಂಡಿದ್ದು ವಿಚಾರಿಸಿದಾಗ ವಿದ್ಯಾರ್ಥಿನಿ‌ ನಡೆದ ಘಟನೆ ವಿವರಿಸಿದ್ದಾಳೆ. ನೊಂದ ವಿದ್ಯಾರ್ಥಿನಿ ಆರೋಪಿ ನಜೀರನಿಗೆ ಚಪ್ಪಲಿ ಏಟು ನೀಡಿದ್ದು ಸ್ಥಳೀಯರು ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಕುಂದಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿದ್ಯಾರ್ಥಿನಿಯಿಂದ ದೂರು ದಾಖಲು ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!