Sunday, June 29, 2025
spot_imgspot_img
spot_imgspot_img

ಕುಂದಾಪುರ: ವ್ಯಕ್ತಿಯೋರ್ವ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ..!

- Advertisement -
- Advertisement -

ಕುಂದಾಪುರ: ವ್ಯಕ್ತಿಯೊಬ್ಬರು ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ನಡೆದಿದೆ.

ಮೃತ ಪಟ್ಟ ವ್ಯಕ್ತಿ ಕೋಟ ಹೀರೆ ಶ್ರೀಮಹಾಲಿಂಗೇಶ್ವರ ದೇವಳದ ಸಮೀಪದ ನಿವಾಸಿ ಜಿ.ಸುರೇಂದ್ರ(70) ಎಂದು ಗುರುತಿಸಲಾಗಿದೆ.

ಇವರು ಅನಾರೋಗ್ಯದ ಕಾರಣದಿದಂದ ನ.2ರಂದು ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ನ.5ರಂದು ಬೆಳಗ್ಗೆ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಎಲ್ಲ ಕಡೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ. ಸಂಜೆ ಸಂಜೆ 5:45ರ ಸುಮಾರಿಗೆ ಕೋಟೇಶ್ವರ ಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಘಟನಯ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದಾರೆ.

- Advertisement -

Related news

error: Content is protected !!