- Advertisement -
- Advertisement -
ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ಬೈಕ್ ಸವಾರ ಸಾವನ್ನಪ್ಪಿದ್ದು ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತಪಟ್ಟವರನ್ನು ಗಂಗೊಳ್ಳಿ ಪೋಸ್ಟ್ ಆಫೀಸ್ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಗಂಭೀರ ಗಾಯಗೊಂಡವರನ್ನು ಫಾಜ್ಲು ಎಂಬುವರ ಮಗ ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಅಪಘಾತ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ ಸ್ಥಳಕ್ಕಾಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿದರೆ, ಗಂಗೊಳ್ಳಿಯ ಎಂ ಏಚ್ ಐ 24x 7ಆಂಬ್ಯುಲೆನ್ಸ್ ಮೂಲಕ ಇಬ್ಬರನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -