Tuesday, May 7, 2024
spot_imgspot_img
spot_imgspot_img

ಕುಂದಾಪುರ : ಬನ್ಸ್ ರಾಘು ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

- Advertisement -G L Acharya panikkar
- Advertisement -

ಕುಂದಾಪುರದ ರಾಘವೇಂದ್ರ ಶೇರುಗಾರ್ ಅಲಿಯಾಸ್ ಬನ್ಸ್ ರಾಘು(42) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ರವಿವಾರ ಸಂಜೆ ಕೃತ್ಯ ನಡೆದ ತಕ್ಷಣವೇ ಪೊಲೀಸ್ ಇಲಾಖೆ ಆರೋಪಿ ಬಂಧನಕ್ಕೆ ಕಾರ್ಯಪ್ರವೃತ್ತರಾಗಿದ್ದು ಉಡುಪಿ ಎಸ್ಪಿ ಡಾ.ಅರುಣ್ ಕೆ. ಮೂರು ವಿಶೇಷ ತನಿಖಾ ತಂಡ ರಚಿಸಿದ್ದರು. ಪೊಲೀಸರ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು ಸಿಸಿ ಟಿವಿ ದೃಶ್ಯಾವಳಿ ಸಹಿತ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದು ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆಹಾಕಿ ಆರೋಪಿಗಳ ಪತ್ತೆಗೆ ಶಿವಮೊಗ್ಗ, ಬೆಂಗಳೂರು ಸಹಿತ ವಿವಿಧ ಕಡೆಗಳಿಗೆ ತನಿಖಾ ತಂಡ ತೆರಳಿತ್ತು.

ಪೊಲೀಸರ ಒಂದು ತಂಡ ಶಿವಮೊಗ್ಗ ಮೂಲದ ಇಬ್ಬರು ಆರೋಪಿಗಳನ್ನು ಗುರುವಾರ ವಶಕ್ಕೆ ಪಡೆದಿದ್ದು ವಿಚಾರಣೆಗೆ ಒಳಪಡಿಸಿದೆ. ಶಿವಮೊಗ್ಗ ಮೂಲದ ಶಫಿವುಲ್ಲಾ (40) ಹಾಗೂ ಇಮ್ರಾನ್ (43) ಬಂಧಿತ ಆರೋಪಿಗಳು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು 2ನೇ ಹೆಚ್ಚುವರಿ ಸಿವಿಲ್ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ಏನು ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!