Saturday, June 6, 2026
spot_imgspot_img
spot_imgspot_img

ಕುಂದಾಪುರ: ಬೈಕ್ ಸ್ಕಿಡ್- ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ಕುಂದಾಪುರ: ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತಲ್ಲೂರು – ಜಾಲಾಡಿ ನಡುವಿನ ಎಂಬಾಕ್ ಮೆಂಟ್‌ನಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ಸವಾರ ಅಂದಾಜು 50-55ವರ್ಷದವರಾಗಿದ್ದು, ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಬೆಂಗಳೂರು ನೋಂದಣಿಯ ಕೆಎ09ಇ 8394 ಯಮಾಹಾ ಅರ್ ಎಕ್ಸ್ 100 ಬೈಕಿನಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದರು. ಸಂಜೆ ಮಳೆ ಬಂದಿದ್ದರಿಂದ ಬೈಕ್ ಸ್ಕಿಡ್ ಆಗಿರಬಹುದು ಎಂದು ಅಂದಾಜಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ತಕ್ಷಣ ಸ್ಪಂದಿಸಿ ಗಾಯಾಳು ಬೈಕ್ ಸವಾರನನ್ನು ಅಂಬ್ಯುಲನ್ಸ್ ತರಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸವಾರ ಗಂಭೀರ ಗಾಯಗೊಂಡಿದ್ದಾರೆ.

- Advertisement -

Related news

error: Content is protected !!