





ಕುಂದಾಪುರ: ಸರ್ವಿಸ್ ರಸ್ತೆಯಲ್ಲಿ ಬೈಕುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನಲ್ಲಿನ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರ ಕುಂದಾಪುರ ನಗರದ ಬರೆಕಟ್ಟುವಿನ ಬಾಳೆಹಿತ್ತು ನಿವಾಸಿಯಾದ ಪೈಂಟರ್ ವೆಂಕಟೇಶ್ ಎಂಬುವರ ಪುತ್ರ ಖಾಸಗಿ ಕಂಪನಿಯೊಂದರ ಉದ್ಯೋಗಿ ಶಶಾಂಕ್ ಮೊಗವೀರ(22) ಎಂದು ಗುರುತಿಸಲಾಗಿದೆ.
ಮೃತ ಶಶಾಂಕ್ ಮೊಗವೀರ ನಿನ್ನೆ ರಾತ್ರಿ 11ರ ವೇಳೆಗೆ ಹಂಗಳೂರಿನ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಹಿಂತಿರುಗುವ ಸಮಯದಲ್ಲಿ ಅಪಘಾತ ನಡೆದಿದೆ. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟರಲ್ಲಾಗಲೇ ಅವರು ವೈದ್ಯರು ಶಶಾಂಕ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಬುಲೆಟ್ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಗಂಭೀರ ಗಾಯಗೊಂಡಿದ್ದು ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.