Saturday, June 28, 2025
spot_imgspot_img
spot_imgspot_img

ಕುಂದಾಪುರ: ಟಿಪ್ಪರ್ ಡಿಕ್ಕಿ; ವ್ಯಕ್ತಿ ಸಾವು..!

- Advertisement -
- Advertisement -

ಕುಂದಾಪುರ: ತಂದೆಯ ತಿಥಿಯ ದಿನವೇ ಮಗ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ತಾಲೂಕಿನ ಕಾಳಾವರದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಕಾಳಾವರ ದಿ.ರಾಮಕೃಷ್ಣ ಆಚಾರ್ಯ ಅವರ ಪುತ್ರ ರಾಘವೇಂದ್ರ ಆಚಾರ್ಯ ಎಂದು ಗುರುತಿಸಲಾಗಿದೆ.

ಮರಳು ತುಂಬಿದ ಟಿಪ್ಪರ್ ರಿವರ್ಸ್ ಬರುತ್ತಿದ್ದ ವೇಳೆ ಮನೆಯ ಗೇಟಿನ ಪಕ್ಕದಲ್ಲಿ ನಿಂತಿದ್ದ ರಾಘವೇಂದ್ರ ಅವರಿಗೆ ಟಿಪ್ಪರ್ ಡಿಕ್ಕಿ ಹೊಡೆದಿದ್ದು ಗೇಟಿನ ಪಿಲ್ಲ‌ರ್ ಮತ್ತು ಟಿಪ್ಪರ್ ನ ಹಿಂದುಗಡೆಯ ಬಾಡಿಗೆ ನಡುವೆ ಸಿಕ್ಕಿ ತಲೆ ಒಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗ್ರಾಮಾಂತರ ಕಂಡೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!