Friday, March 29, 2024
spot_imgspot_img
spot_imgspot_img

ಕುಂದಾಪುರ: ಅನ್ನಭಾಗ್ಯದ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನಿಗೆ ಮಾರ್ಗಮಧ್ಯೆಯೇ ಹಲ್ಲೆ ನಡೆಸಿದ ಕಾರು ಚಾಲಕ

- Advertisement -G L Acharya panikkar
- Advertisement -

ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ರಸ್ತೆಯಲ್ಲಿಯೇ ಕಾರು ಚಾಲಕನೊಬ್ಬ ಹಲ್ಲೆಗೈದು, ಅವಾಚ್ಯವಾಗಿ ನಿಂದಿಸಿದ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಅಸೋಡು ನಂದಿಕೇಶ್ವರ ದೇಗುಲದ ಕಮಾನು ಬಳಿಯ ಅಸೋಡಿನಲ್ಲಿ ನಡೆದಿದೆ. ತಲ್ಲೂರು ಗೋದಾಮಿನಿಂದ ಅನ್ನಭಾಗ್ಯ ಅಕ್ಕಿಯನ್ನು ನ್ಯಾಯ ಬೆಲೆ ಅಂಗಡಿಗಳಿಗೆ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕ ಮಹಮ್ಮದ್ ಇಸಾಕ್ ಅವರಿಗೆ ಹಿಂದಿನಿಂದ ಬಂದ ರಿಟ್ಸ್ ಕಾರಿನ ಚಾಲಕ, ಕಾರನ್ನು ಮುಂದಕ್ಕೆ ತಂದು ನಿಲ್ಲಿಸಿ ಹಲ್ಲೆಗೈದಿದ್ದಾನೆ.

ಕಾರು ನಿಲ್ಲಿಸಿದ ಆಸಾಮಿ ಲಾರಿಗೆ ಹತ್ತಿ ಹಲ್ಲೆ ನಡೆಸಿದ್ದಾನೆ. ಕೈಯಿಂದ ಹೊಡೆದು, ಕಾಲಿನಿಂದ ತುಳಿಯುತ್ತಿರುವ ದೃಶ್ಯ ವೈರಲ್ ಆದ ವೀಡಿಯೋದಲ್ಲಿ ಕಾಣಬಹುದಾಗಿದೆ. ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾರು ಚಾಲಕನ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾರು ಚಾಲಕನ ವಿರುದ್ಧ ಇಸಾಕ್ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!