- Advertisement -
- Advertisement -
ನವ ವಿವಾಹಿತೆಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಶಿಡ್ಲನಹಟ್ಟಿ ಗ್ರಾಮದಲ್ಲಿ ನಡೆದಿದೆ.
ರಕ್ಷಿತಾ (19) ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಕಳೆದ ಇಪ್ಪತ್ತು ದಿನಗಳ ಹಿಂದೆ ಸೋದರ ಮಾವನೊಂದಿಗೆ ಈಕೆಯ ಮದುವೆ ನಡೆದಿತ್ತು.
ಅನಾರೋಗ್ಯ ಕಾರಣದಿಂದ ಖಿನ್ನತೆಗೆ ಒಳಗಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
- Advertisement -