- Advertisement -
- Advertisement -
ಚೆನ್ನೈ: ಬಿಜೆಪಿ ನಾಯಕಿ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಗುಡಲೂರಿನಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಖುಷ್ಬೂ ಅವರು ಸುರಕ್ಷಿತರಾಗಿದ್ದಾರೆ. ಅವರು ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದರು.ತಮಿಳುನಾಡು ಬಿಜೆಪಿ ಘಟಕ ಹಮ್ಮಿಕೊಂಡಿರುವ ವೇಲ್ ಯಾತ್ರೆಯಲ್ಲಿ ಭಾಗವಹಿಸಲು ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಸುಬ್ರಹ್ಮಣ್ಯ ಸ್ವಾಮಿಯ ಜತೆ ಸಂಬಂಧ ಹೊಂದಿರುವ ಪ್ರದೇಶಗಳನ್ನು ಸಂಪರ್ಕಿಸುವ ಯಾತ್ರೆಯನ್ನು ಬಿಜೆಪಿ ರಾಜ್ಯ ಘಟಕ ಹಮ್ಮಿಕೊಂಡಿದೆ. ಇದನ್ನು ವೇಲ್ ಯಾತ್ರೆ ಎಂದು ಬಣ್ಣಿಸಿರುವ ಬಿಜೆಪಿ. ರಾಜ್ಯದಲ್ಲಿ ಹಿಂದುತ್ವದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ತಡೆಗಟ್ಟಲು ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದೆ.
- Advertisement -