Tuesday, April 23, 2024
spot_imgspot_img
spot_imgspot_img

ಸಂಸದೆ ಶೋಭಾ ಕರಂದ್ಲಾಜೆಗೆ ಕುಸುಮಾ ಟಾಂಗ್!!

- Advertisement -G L Acharya panikkar
- Advertisement -

ಬೆಂಗಳೂರು: ಆರ್ ಆರ್ ನಗರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಅವರು, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಫೇಸ್​ಬುಕ್​​ನಲ್ಲಿ ಟಾಂಗ್ ಕೊಟ್ಟಿದ್ದಾರೆ.

ಡಿ.ಕೆ ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿ.ಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರೂ ಇಂದು ನಮ್ಮ ಜೊತೆಗಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ’ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು.

ಅವರ ಈ ಹೇಳಿಕೆಗೆ ತಮ್ಮ ಫೇಸ್​ಬುಕ್​​ನಲ್ಲಿ ಪ್ರತಿಕ್ರಿಯಿಸಿರುವ ಕುಸುಮಾ, ‘ಪ್ರೀತಿಯ ಅಕ್ಕ.. ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು? ಮಾಡುತ್ತಿರುವವರು ಯಾರು? ಅನ್ನೋದನ್ನ ಇಡೀ ದೇಶವೇ ನೋಡಿದೆ. ನೋಡುತ್ತಿದೆ. ಈ ಸಂದರ್ಭದಲ್ಲಿ ನನಗೆ ಅಕ್ಕ ಮಹಾದೇವಿಯವರ ‘‘ನೊಂದವರ ನೋವ ನೋಯದವರೆತ್ತ ಬಲ್ಲರೋ’’ ಎಂಬ ವಚನ ನೆನಪಿಗೆ ಬರುತ್ತಿದೆ. ರವಿ ಅವರ ಹೆಸರನ್ನ ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ! ಇದು ನಿಮಗೆ ನೀವೇ ಹೇಳಿದಂತೆ ಇದೆ, ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗಬಹುದು’ ಅಂತಾ ಬರೆದುಕೊಂಡಿದ್ದಾರೆ.

- Advertisement -

Related news

error: Content is protected !!