- Advertisement -
- Advertisement -


ವಿಟ್ಲ: ವಿಠಲ ಎಜುಕೇಷನ್ ಸೊಸೈಟಿಯ ಸಂಚಾಲಕ ಎಲ್.ಎನ್. ಕೂಡೂರು (66) ರವರು ಹೃದಾಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ವಿಟ್ಲ ಜೆ.ಸಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷರಾಗಿದ್ದು, campco ದ ಮಾಜಿ ಅಧ್ಯಕ್ಷರಾಗಿ, ಜೆಸಿಐ ಇಂಡಿಯಾ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಆಗಿ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಪಂಚಲಿಂಗೇಶ್ವರ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಮೃತರು ಕೂಡುರು ಕೃಷ್ಣ ಭಟ್ ಮತ್ತು ಕಮಲಮ್ಮ ದಂಪತಿಗಳ ಪುತ್ರರಾಗಿದ್ದು, ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅಂತ್ಯಸಂಸ್ಕಾರವು ಇಂದು ಕೂಡೂರು ಮನೆಯಲ್ಲಿ ನಡೆಯಲಿದೆ ಎಂದು ಅವರ ಬಂಧುಗಳು ತಿಳಿಸಿದ್ದಾರೆ
- Advertisement -