- Advertisement -
- Advertisement -
ತೋಟದ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಕಂಚಿನಕಲ್ ದುರ್ಗ ಎಂಬಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಕೂಲಿ ಕಾರ್ಮಿಕ ಆನಂದ ಪೂಜಾರಿ(55) ಕಾಡಾನೆ ದಾಳಿಯಿಂದ ಮೃತಪಟ್ಟವರು.
ಆಲ್ಲೂರು ಹೋಬಳಿ, ದೊಡ್ಡಮಾಗರವಳ್ಳಿ ಗ್ರಾಪಂ ವ್ಯಾಪ್ತಿಯ ಕಂಚಿನಕಲ್ ದುರ್ಗ ಸಮೀಪದ ಕೆಸುವಿನಕಲ್ ಎಂಬ ಕಾಫಿ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದೆ.
ಬೆಳಗ್ಗೆ ತೋಟದ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಇದರಿಂದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಆನಂದ ಪೂಜಾರಿಯವರು ಹಲವು ವರ್ಷಗಳಿಂದ ನೂರ್ ಅಹ್ಮದ್ ಎಂಬವರಿಗೆ ಸೇರಿದ ಈ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ..
- Advertisement -