- Advertisement -
- Advertisement -
ಬೆಳ್ತಂಗಡಿ: ಜಾಂಡೀಸ್ ಹಾಗೂ ವಿಪರೀತ ರಕ್ತದೊತ್ತಡದಿಂದ ಬಳಲುತ್ತಿದ್ದ ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಅಸುನೀಗಿದ್ದಾರೆ.
ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿಯಾಗಿರುವ ರಾಮ್ ಪ್ರಸಾದ್ ಇತ್ತೀಚಿಗೆ ಜಾಂಡೀಸ್ ರೋಗಕ್ಕೆ ತುತ್ತಾಗಿದ್ದರು. ಹಾಗಾಗಿ ಹೆಚ್ಚಿನ ಚಿಕಿತ್ಸೆಗೆಂದು ಮೂರು ದಿನಗಳ ಹಿಂದಷ್ಟೇ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೆದುಳು, ಲಿವರ್ ಕೂಡ ಕೈ ಕೊಟ್ಟಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೆ ಮೃತರಾಗಿದ್ದಾರೆ.
ಬಜರಂಗದಳ ವೇಣೂರು ಪ್ರಖಂಡದ ಸಂಚಾಲಕರಾಗಿದ್ದ ಅವರು ಹಿಂದೂ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬುತ್ತಿದ್ದರು. ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಮುಂಚೂಣಿಯಲ್ಲಿ ನಿಂತು ನಡೆಸಿಕೊಟ್ಟಿದ್ದಾರೆ. ಕಳೆದ ವರ್ಷ ನಡೆದ ಪಲಾರಗೋಳಿ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
- Advertisement -