- Advertisement -
- Advertisement -






ಭಾರೀ ಮಳೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಅಂದರೆ ಮೇ 31ರಂದು ಎಲ್ಲ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಭಾರೀ ಮಳೆಯಾಗಿದ್ದು ಉಳ್ಳಾಲ ತಾಲೂಕು ಸೇರಿ ಹಲವೆಡೆ ಪ್ರಾಣ ಹಾನಿ ಸಂಭವಿಸಿದೆ. ಈ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಶನಿವಾರ ಕೂಡ ಶಾಲೆಗಳಿಗೆ ರಜೆ ಮುಂದುವರಿಸುವುದಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ. ಮಳೆ ಸಾಕಷ್ಟು ತೊಂದರೆ ಸೃಷ್ಟಿಸಿರುವ ಕಾರಣ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದು ಸಂಜೆ ಮಂಗಳೂರಿಗೆ ಬಂದಿದ್ದಾರೆ.
- Advertisement -








