ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದ ಘಟನ ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಏಕಾಏಕಿ ಭಾರಿ ಗಾತ್ರದ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದಿದ್ದು, ಖಾಸಗಿ ನ್ಯೂಸ್ ಚಾನೆಲ್ ವರದಿಗಾರ, ಮಹಿಳೆ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ರಾಮಣ್ಣ ಶೆಟ್ಟಿ ಪಾರ್ಕ್ನಿಂದ ಡಿಸಿ ಕಚೇರಿಯವರೆಗೂ ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆಯ ಸಂಬಂಧ ಮೆರವಣಿಗೆ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ದೃಶ್ಯ ಪ್ರದರ್ಶಿಸಲು ಎಲ್ಇಡಿ ವಾಲ್ ಹಾಕಲಾಗಿತ್ತು.
ಮೆರವಣಿಗೆಯಲ್ಲಿ ಜನಸಂದಣಿ ಹೆಚ್ಚಾಗಿದ್ದರಿಂದ ವಿಡಿಯೋ ವಾಲ್ ಬಗ್ಗೆ ಹೆಚ್ಚಿನ ಗಮನ ಹರಿದಿರಲಿಲ್ಲ. ಈ ನಡುವೆ ವಿಡಿಯೋ ವಾಲ್ ಕುಸಿದುಬಿದ್ದಿದೆ. ಪರಿಣಾಮ ಅದರ ಕೆಳಕ್ಕೆ ನಿಂತಿದ್ದ ಓರ್ವ ಪತ್ರಕರ್ತ ಹಾಗೂ ಮೂವರಿಗೆ ಗಾಯವಾಗಿದೆ. ಈ ಪೈಕಿ ಓರ್ವರ ತಲೆಗೆ ಪೆಟ್ಟುಬಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಗೀತಾ ಶಿವರಾಜ್ ಕುಮಾರ್ ಅವರ ಸಹೋದರ ಸಚಿವ ಮಧುಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.