- Advertisement -
- Advertisement -



ಬೆಂಗಳೂರು: ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಎಂಟು ಸ್ಥಾನಗಳು ಕಾಂಗ್ರೆಸ್ಗೆ ಸಿಗಲಿದ್ದು, ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಸುಮಾರು ಆಕಾಂಕ್ಷಿಗಳಲ್ಲಿ ಕೊನೆಗೂ ಹೈಕಮಾಂಡ್ ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ ಎಂಟು ಜನರಿಗೆ ಮಣೆ ಹಾಕಿದೆ.
ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನು ಆಯ್ಕೆ ಮಾಡಿದೆ.

- Advertisement -