- Advertisement -
- Advertisement -
ಬೆಂಗಳೂರು: ವಿಧಾನ ಪರಿಷತ್ ಸದನದಲ್ಲಿ ಕಡ್ಡಾಯವಾಗಿ ಮೊಬೈಲ್ ಬಳಸುವಂತಿಲ್ಲ ಎಂದು ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ಅಧಿಕೃತವಾಗಿ ಘೋಷಿಸಿದ್ದಾರೆ.
ಈ ಹಿಂದೆ ಸದನದಲ್ಲಿ ಮೊಬೈಲ್ ಬಳಕೆ ಮಾಡಬಾರದು ಎಂದು ಆದೇಶವಾಗಿತ್ತು. ಆದರೆ ಸದನದೊಳಗೆ ಈಗ ಮೊಬೈಲ್ಗಳು ರಿಂಗಣಿಸುತ್ತಿದೆ. ಇದು ಕೊನೆಯ ವಾರ್ನಿಂಗ್. ಇನ್ನು ಮುಂದೆ ಸದನದೊಳಗೆ ಯಾರೂ ಮೊಬೈಲ್ ಬಳಸುವಂತಿಲ್ಲ.
ಮಾಹಿತಿಗಾಗಿ ಮೊಬೈಲ್ ಬಳಸುವುದಾದರೆ, ಸಭಾಪತಿಗಳ ಅನುಮತಿ ಪಡೆಯಬೇಕು. ನಿಯಮ ಮೀರಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
- Advertisement -