- Advertisement -
- Advertisement -
ಉಪ್ಪಿನಂಗಡಿ: ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಮೆಸ್ಕಾಂ ಪವರ್ ಮ್ಯಾನ್ ವಿದ್ಯುತ್ ಶಾಕ್ ಗೊಳಗಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ತವ್ಯ ನಿರತ ಕಲ್ಲೇರಿ ಸೆಕ್ಷನ್ ಆಫೀಸಿನ ಮೆಸ್ಕಾಂ ಪವರ್ ಮ್ಯಾನ್ ವಿಕಾಸ್ ಎಂಬವರು ಮೃತಪಟ್ಟವರು.ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಈ ಘಟನೆ ಸಂಭವಿಸಿದೆ ಎಂಬ ಮಾಹಿತಿ ಲಭಿಸಿದೆ. ಕಳೆದ ಎರಡು ದಿನದಿಂದ ಭಾರಿ ಗಾಳಿ ಮಳೆ ಸುರಿದ ಕಾರಣವಿದ್ಯುತ್ ಅಡಚಣೆ ಉಂಟಾಗಿತ್ತು.
ವಿದ್ಯುತ್ ಸರಬರಾಜು ಸರಿಪಡಿಸುವ ಸಂದರ್ಭದಲ್ಲಿ ಈ ದುರ್ಘಟನೆಯ ಸಂಭವಿಸಿದ್ದು ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ತನಿಖೆ ನಡೆಸುತ್ತಿದ್ದಾರೆ.
- Advertisement -