- Advertisement -
- Advertisement -





ವಿಟ್ಲ: ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮೇಗಿನಪೇಟೆಯಲ್ಲಿ ಲಯನ್ಸ್ ಕ್ಲಬ್ ಹಾಗೂ ಯಕ್ಷಭಾರತ ಸೇವಾ ಸಂಸ್ಥೆಯ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂನ್ 09 ಮಂಗಳವಾರದಂದು ನಡೆಯಿತು.

ಕಳೆದ ನಾಲ್ಕು ವರ್ಷಗಳಿಂದ ಈ ಸಂಸ್ಥೆಗಳು ಶಾಲಾ ಮಕ್ಕಳಿಗೆ ಉಚಿತವಾಗಿ ಬರೆಯುವ ಪುಸ್ತಕಗಳನ್ನು ನೀಡುತ್ತಿದ್ದು, ಈ ವರ್ಷವೂ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ,ಭಾರತ್ ಶಾಮಿಯಾನ, ಕಲ್ಲಕಟ್ಟ ಹಾಗೂ ಯಕ್ಷಭಾರತ ಸೇವಾ ಸಂಸ್ಥೆಯ ಸದಸ್ಯೆ ಪ್ರನಿತಾ ಅವರು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು.
- Advertisement -








