ವಿಟ್ಲ: ಲಯನ್ಸ್ ಜಿಲ್ಲಾ 317 ಡಿ ಇದರ ಪ್ರಾಂತೀಯ ಏಳರ ಪ್ರಾಂತೀಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ ಎನ್ ರಾಜೇಂದ್ರ ಕುಮಾರ್ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಪ್ರಾಂತೀಯ ಏಳರ ಅಧ್ಯಕ್ಷ ಸುದರ್ಶನ್ ಪಡಿಯಾರ್, ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಅಧ್ಯಕ್ಷ ಬಿ ಸಂದೇಶ್ ಶೆಟ್ಟಿ, ಕೋಶಾಧಿಕಾರಿ ಓ ಈ ಕೃಷ್ಣ, ಲಯನ್ಸ್ ಕ್ಲಬ್ ವಿಟ್ಲ ಸಿಟಿಯ ಸಕ್ರಿಯ ಸದಸ್ಯರುಗಳಾದ ಸುರೇಶ್ ಬನಾರಿ, ಜಯರಾಮ್ ಬಲ್ಲಾಳ್, ಮೋಹನ್ ಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.
ಲಯನ್ಸ್ ಜಿಲ್ಲಾ 317D ಇದರ ಪ್ರಾಂತೀಯ ಏಳರ ಅಧ್ಯಕ್ಷ ಸುದರ್ಶನ್ ಪಡಿಯರ್ ಅವರ ನೇತೃತ್ವದಲ್ಲಿ ಕರ್ನಾಟಕ ಸಹಕಾರಿ ಮಾರಾಟ ಮಹಾಮಂಡಳಿ ,ಇದರ ಅಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾದ ಡಾ ಎಂ ಎನ್ ರಾಜೇಂದ್ರ ಕುಮಾರ್ ಇವರನ್ನು ಅಭಿನಂದಿಸಲಾಯಿತು. ಲಯನ್ಸ್ ಜಿಲ್ಲಾ 317 ಡಿ ಇದರ ಪ್ರಾಂತೀಯ ಏಳರ ಸಮ್ಮೇಳನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಗೋಪಿನಾಥ್ ಭಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ್ ಕುಮಾರ್ ಇವರನ್ನು ಆಹ್ವಾನಿಸಲಾಯಿತು.