Saturday, June 28, 2025
spot_imgspot_img
spot_imgspot_img

ಕಾಪು ಬೀಚ್ ನಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿದ ಸ್ಥಳೀಯ ಮೀನುಗಾರರು

- Advertisement -
- Advertisement -

ಕಾಪು : ಸಾಂಪ್ರದಾಯಿಕ ಮೀನುಗಾರಿಕೆಗೆ ಬಲೆ ಇಡಲು ಸಮುದ್ರಕ್ಕೆ ಹೋಗಿ, ಸಮುದ್ರ ಪಾಲಾಗುವ ಭೀತಿಗೊಳಗಾದ ಯುವಕನನ್ನು ಸ್ಥಳೀಯ ಮಿನುಗಾರರು ರಕ್ಷಿಸಿದ ಘಟನೆ ಇಂದು ಕಾಪು ಬೀಚ್ ನಲ್ಲಿ ನಡೆದಿದೆ.

ಕಾಪು ಪಡುಗ್ರಾಮದ ನಿವಾಸಿ ಸಚಿನ್ (31) ಸ್ಥಳೀಯ ಮೀನುಗಾರರಿಂದ ರಕ್ಚಿಸಲ್ಪಟ್ಟ ಯುವಕ.

ರವಿವಾರ ರಜಾ ದಿನವಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗಾಗಿ ಬಲೆ ಇಡಲೆಂದು ಬಲೆಯೊಂದಿಗೆ ತೆರಳಿದ್ದ ಸಚಿನ್ ಅವರು ಸಮುದ್ರದಲ್ಲಿ ಮುಳುಗಿ, ಸಮುದ್ರ ಪಾಲಾಗುವ ಭೀತಿ ಎದುರಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಬೊಬ್ಬೆ ಹಾಕಿದ್ದು, ಮೀನುಗಾರಿಕಾ ವೃತ್ತಿನಿರತರಾದ ಶರ್ಮಾ, ಹರೀಶ್ ಕರ್ಕೇರ ಅವರು ಸಮುದ್ರಕ್ಕೆ ಇಳಿದು ಯುವಕನನ್ನು ರಕ್ಷಿಸಿದ್ದಾರೆ.

ಯುವಕನನ್ನು ರಕ್ಷಿಸಿ ಮೇಲಕ್ಕೆ ಕರೆತರುವಾಗ ರಕ್ಷಣಾ ದೋಣಿ ಕೂಡಾ ಮಗುಚಿ ಬಿದ್ದಿದ್ದು, ಈ ವೇಳೆ ಕಾಪು ಬೀಚ್ ನಲ್ಲಿರುವ ಲೈಫ್ ಗಾರ್ಡ್ ಗಳು ಅವರ ರಕ್ಷಣೆಗೆ ಧಾವಿಸಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳೀಯ ಮೀನುಗಾರರಾದ ಬಾಲಕೃಷ್ಣ, ಲೋಕೇಶ್, ಶಿವಾಜಿ ಹಾಗೂ ಕರಾವಳಿ ಕಾವಲು ಪಡೆ ರಕ್ಷಕರು ಸಹಕಾರದೊಂದಿಗೆ ಮೇಲಕ್ಕೆ ಕರೆತಂದು ಯುವಕನ ಪ್ರಾಣ ರಕ್ಷಣೆಗೆ ನೆರವಾಗಿದ್ದಾರೆ.

- Advertisement -

Related news

error: Content is protected !!