Friday, June 27, 2025
spot_imgspot_img
spot_imgspot_img

ಕುಂದಾಪುರ:‌ ಲೋಕಾಯುಕ್ತ ದಾಳಿ – ಲಂಚ ಪಡೆಯುತ್ತಿದ್ದ ವೇಳೆ ಅರಣ್ಯ ಅಧಿಕಾರಿ ಅರೆಸ್ಟ್!

- Advertisement -
- Advertisement -

ಕುಂದಾಪುರ:‌ ಉಡುಪಿ ಜಿಲ್ಲೆಯ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಯೋರ್ವ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬೈಂದೂರು ವಲಯದ ಉಪವಲಯ ಅರಣ್ಯಧಿಕಾರಿ ಬಂಗಾರಪ್ಪ ಎಂಬಾತ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯು ಮರ ತೆರವುಗೊಳಿಸುವ ಅನುಮತಿಗಾಗಿ ಲಂಚ ಸ್ವೀಕರಿಸುತ್ತಿದ್ದ ಎನ್ನಲಾಗಿದೆ.

ಬೈಂದೂರು ತಾಲೂಕಿನ ಶಿರೂರು ನಿವಾಸಿ ಮಹಮ್ಮದ್ ಅನ್ವರ್ ಹಸನ್ ಎಂಬುವರ ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರವನ್ನು ತೆರವುಗೊಳಿಸಲು ಅರಣ್ಯಇಲಾಖೆಯಿಂದ ಅನುಮತಿ ನೀಡುವ ಬಗ್ಗೆ ಆರೋಪಿಗಳಿಗೆ ಅರ್ಜಿ ನೀಡಿದ್ದರು. ಈ ಸಂಬಂಧ ಪರವಾನಿಗೆ ನೀಡಲು ನಾಲ್ಕು ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮಹಮ್ಮದ್ ಅನ್ವರ್ ಹಸನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಆರೋಪಿ ಬಂಗಾರಪ್ಪನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧಿಕ್ಷಕ ನಟರಾಜ್ ಎಂ. ಎ ಮಾರ್ಗದರ್ಶನದಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಕೆ. ಸಿ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಮಂಜುನಾಥ್ ಇವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಮಲ್ಲಿಕಾ, ಪುಷ್ಪಾವತಿ, ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ರಮೇಶ್, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಹಾಗೂ ಸುಧೀರ್ ಇವರು ದಾಳಿ ಯಲ್ಲಿ ಪಾಲ್ಗೊಂಡಿದ್ದರು

- Advertisement -

Related news

error: Content is protected !!