- Advertisement -
- Advertisement -
ಸುರತ್ಕಲ್ : ಸ್ಕೂಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮುಕ್ಕ ಇಂಡಿಯನ್ ಪೆಟ್ರೋಲ್ ಪಂಪ್ ಬಳಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಮೃತ ವಿಧ್ಯಾರ್ಥಿನಿಯನ್ನು ಮುಕ್ಕ ನಿವಾಸಿ ಯಶವಂತ ಎಂಬವರ ಪುತ್ರಿ, ಎನ್ಐಟಿಕೆಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮಾನ್ವಿ (12)ಎಂದು ಗುರುತಿಸಲಾಗಿದೆ.
ತಂದೆ, ಮಗಳು ಸ್ಕೂಟಿಯಲ್ಲಿ ಮುಕ್ಕದಿಂದ ಮನೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
- Advertisement -