Sunday, June 29, 2025
spot_imgspot_img
spot_imgspot_img

ಮಂಗಳೂರು : ಚಾರ್ಮಾಡಿ ಘಾಟ್‌ ತಿರುವಿನಲ್ಲಿ ಲಾರಿ ಲಾಕ್‌ ; ಗಂಟೆಗಟ್ಟಲೆ ಟ್ರಾಫಿಕ್ ಜಾಂ

- Advertisement -
- Advertisement -

ಮಂಗಳೂರು : ಚಾರ್ಮಾಡಿ ಘಾಟ್‌ ತಿರುವಿನಲ್ಲಿ ಲಾರಿಯೊಂದು ಸಿಕ್ಕಿ ಹಾಕಿಕೊಂಡಿದ್ದು, ಕಿಲೋಮೀಟರ್ ಗಂಟೆ ಗಟ್ಟಲೆ ಟ್ರಾಫಿಕ್‌ ಜಾಂ ಆದ ಘಟನೆ ಇಂದು ನಡೆದಿದೆ.

ಚಾರ್ಮಾಡಿ ಘಾಟಿಯ 2ನೇ ತಿರುವಿನಲ್ಲಿ ಲಾರಿ ಲಾಕ್ ಆಗಿದ್ದು, ಟರ್ನ್‌ ಆಗದೇ ನಿಂತು ಹೋಗಿದೆ. ಬೆಳಗ್ಗಿನಿಂದ ಚಾರ್ಮಾಡಿ ಘಾಟಿನಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದು ಮುಂದೆಯೂ ಹೋಗಲಾರದೇ, ಹಿಂದೆಯೂ ಬರಲಾಗದೇ ಪರದಾಡುವಂತೆ ಆಗಿದೆ.

ಬಳ್ಳಾರಿಯಿಂದ ಸರಕನ್ನ ತುಂಬಿಕೊಂಡು ಮಂಗಳೂರಿಗೆ ಹೋಗುತ್ತಿದ್ದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಲಾಕ್ ಆಗಿದ್ದರಿಂದ ವಾಹನ ಸವಾರರು ಪರದಾಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಹತ್ತು ಚಕ್ರದ ಬಸ್ಸು ಹಾಗೂ ಲಾರಿ ಸೇರಿದಂತೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧವಿದೆ. ಸರ್ಕಾರದ ಅಧಿಕೃತ ಆದೇಶವಿದ್ದರೂ ಕೂಡ ಅಪಾಯಕಾರಿ ತಿರುವಿನ ಚಾರ್ಮಾಡಿ ಘಾಟಿಯಲ್ಲಿ ಅಷ್ಟು ದೊಡ್ಡ ವಾಹನಗಳು ಹೇಗೆ ಹೋಗಿದ್ದಾವೆ ಅನ್ನೋದು ಯಕ್ಷಪ್ರಶ್ನೆಯಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರು ಹಾಗೂ ಚಿಕ್ಕಮಗಳೂರು ಗಡಿಯಾಗಿರುವ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಇತರೆ ಅಧಿಕಾರಿಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರುಗಳ ಕಣ್ಣುಗಳನ್ನು ತಪ್ಪಿಸಿ 12 ಚಕ್ರದ ಲಾರಿ ಹೇಗೆ ಹೋಯಿತು ಎನ್ನುವುದು ಸ್ಥಳೀಯರ ಅನುಮಾನಕ್ಕೂ ಕಾರಣವಾಗಿದೆ. ಸರ್ಕಾರದ ಅಧಿಕೃತ ಆದೇಶವಿದ್ದರೂ ಕೂಡ ಪೊಲೀಸರೇ ಲಾರಿಗಳನ್ನು ಬಿಡುತ್ತಿದ್ದಾರೆ ಎಂದು ಸ್ಥಳೀಯರು ಹಾಗೂ ವಾಹನ ಸವಾರರು ಆರೋಪಿಸಿದ್ದಾರೆ.

- Advertisement -

Related news

error: Content is protected !!