- Advertisement -
- Advertisement -


ದಾಂಡೇಲಿ: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಗಾಯಗೊಂಡ ಘಟನೆ ಹಳಿಯಾಳ ದಾಂಡೇಲಿ ರಾಜ್ಯ ಹೆದ್ದಾರಿಯಲ್ಲಿ ಬರುವ ಆಲೂರು- ಕರ್ಕಾ ಮಧ್ಯೆ ನಡೆದಿದೆ.
ಗಾಯಗೊಂಡ ಚಾಲಕ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಿನಭಾವಿ ಗ್ರಾಮದ ನಿವಾಸಿ ವಿನಾಯಕ ಚ್ಯಾಟಿ ಎಂದು ಗುರುತುಸಲಾಗಿದೆ.
ಗ್ಯಾಸ್ ಸಿಲಿಂಡರ್ಗಳನ್ನು ಹೇರಿಕೊಂಡು ಬರುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಗಾಯಗೊಂಡಿದ್ದಾನೆ. ಅಪಘಾತದ ವೇಳೆ ಚಾಲಕ ವಾಹನದೊಳಗಡೆ ಸಿಲುಕಿಕೊಂಡಿದ್ದು, ಸ್ಥಳೀಯರು ವಾಹನದ ಬಾಗಿಲು ಮುರಿದು ಚಾಲಕನನ್ನು ವಾಹನದಿಂದ ಕೆಳಗಿಳಿಸಿ ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ 108 ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- Advertisement -