Saturday, April 27, 2024
spot_imgspot_img
spot_imgspot_img

ಪ್ರಿಯಕರನ ಸಾವಿಗೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಬಾಲಕಿ!

- Advertisement -G L Acharya panikkar
- Advertisement -

ರಾಂಚಿ: ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವುದನ್ನು ಕೇಳಿ ಆಘಾತಗೊಂಡು, 2 ದಿನಗಳ ಬಳಿಕ 15 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ರಾತ್ರಿ ಜಾರ್ಖಂಡ್‍ನ ಪಕೂರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಿಯಕರನ ಆತ್ಮಹತ್ಯೆಯ ವಿಷಯ ತಿಳಿದು ಬೇಸತ್ತು ಬಾಲಕಿ ಆತ್ಮಹತ್ಯೆಗೆ ಮಾಡಿಕೊಂಡಿರುವುದಾಗಿ ಆಕೆಯ ಕುಟುಂಬಸ್ಥರು ತಿಳಿಸಿದ್ದಾರೆ.

ಪೋಷಕರಿಲ್ಲದ ವೇಳೆ ಬಾಲಕಿ ಸೋಮವಾರ ರಾತ್ರಿ ಮನೆಯ ಸಮೀಪದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಗಳವಾರ ಬೆಳಗ್ಗೆ ಬಾಲಕಿಯ ಮೃತ ದೇಹ ಕಂಡ ಗ್ರಾಮಸ್ಥರು ಆಕೆಯ ಕುಟುಂಬಸ್ಥರಿಗೆ ಸಾವಿನ ಕುರಿತಾಗಿ ಮಾಹಿತಿ ನೀಡಿದ್ದಾರೆ. ಮನೆಗೆ ಹಿಂದಿರುಗಿ ಬಂದ ಪೋಷಕರಿಗೆ ಮಗಳ ಸಾವಿನ ವಿಚಾರ ತಿಳಿದುಬಂದಿದ್ದು, ಪ್ರಿಯಕರನ ಸಾವಿನ ಸುದ್ದಿಯಿಂದ ಬೇಸತ್ತು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಬಾಲಕಿ ತಂದೆ ತಿಳಿಸಿದ್ದಾರೆ.

ಬಾಲಕಿಯ ತಂದೆ ಪ್ರೀತಿಗೆ ನಿರಾಕರಿಸಿದ ಕಾರಣ ಮಗ ಮೃತಪಟ್ಟಿದ್ದಾನೆ ಎಂದು ಪ್ರಿಯಕರ ತಾಯಿ ಪೊಲೀಸ್ ಠಾಣೆಯಲ್ಲಿ ಬಾಲಕಿ ತಂದೆ ವಿರುದ್ಧ ದೂರು ದಾಖಲಿಸಿದ್ದಾರೆ. ಅಲ್ಲದೆ ಬಾಲಕಿಯನ್ನು ಪ್ರೀತಿಸುತ್ತಿದ್ದರಿಂದ ಈ ಹಿಂದೆ ನನ್ನ ಮಗನಿಗೆ ಬಾಲಕಿ ತಂದೆ ಜೀವ ಬೆದರಿಕೆ ಕೂಡ ಹಾಕಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

- Advertisement -

Related news

error: Content is protected !!