Wednesday, April 24, 2024
spot_imgspot_img
spot_imgspot_img

‘ಲವ್​​ ಯು ರಚ್ಚು’ ಫೈಟರ್ ಸಾವು ಕೇಸ್; ನಿರೀಕ್ಷಣಾ ಜಾಮೀನು ಮೊರೆ ಹೋದ ಅಜಯ್ ರಾವ್

- Advertisement -G L Acharya panikkar
- Advertisement -

ರಾಮನಗರ: ‘ಲವ್ ಯು ರಚ್ಚು’ ಚಿತ್ರೀಕರಣದ ವೇಳೆ ಸಂಭವಿಸಿದ ದುರಂತ ಪ್ರಕರಣದಲ್ಲಿ ಚಿತ್ರದ ಹೀರೋ ಅಜಯ್ ರಾವ್​ಗೆ ಬಂಧನದ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ರಾಮನಗರ ಮೂರನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಲ್ಲಿ ಅಜಯ್ ರಾವ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಿಡದಿ ಠಾಣೆ ಪೊಲೀಸರು ದುರಂತ ಪ್ರಕರಣ ಸಂಬಂಧ ಆಗಸ್ಟ್​ 26 ರಂದು ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ.

ವಿಚಾರಣೆಗೆ ಹಾಜರಾಗುವ ಮುನ್ನವೇ ಅಜಯ್ ರಾವ್ ಅವರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಚಿತ್ರದ ಹೀರೋಯಿನ್ ರಚಿತಾ ರಾಮ್ ಅವರು ಬಿಡದಿ ಠಾಣೆಗೆ ಭೇಟಿ ನೀಡಿ ಹೇಳಿಕೆಯನ್ನ ನೀಡಿದ್ದಾರೆ.

ಆಗಸ್ಟ್ 9 ರಂದು ಬಿಡದಿಯ‌ ಜ್ಯೋಗಯ್ಯನಪಾಳ್ಯ ಗ್ರಾಮದಲ್ಲಿ‌ ಚಿತ್ರೀಕರಣ ನಡೆಯುತ್ತಿದ್ದಾಗ ಅವಘಡ ಸಂಭವಿಸಿತ್ತು. ವಿದ್ಯುತ್ ಶಾಕ್ ತಗುಲಿ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಯಾವುದೇ ಅನುಮತಿ ಪಡೆಯದೇ ಚಿತ್ರೀಕರಣ ನಡೆಸುತ್ತಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!