ಮಧ್ಯಪ್ರದೇಶ: ಸ್ನೇಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ನೊಂದಿದ್ದ ಗೆಳೆಯ ಚಲಿಸುತ್ತಿದ್ದ ರೈಲಿನಿಂದ ಜಿಗಿದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಮಾರುತಿನಗರದ ನಿವಾಸಿ ದೇವೇಂದ್ರ(25) ಎನ್ನಲಾಗಿದೆ. ಈತ ಮಾರ್ಕೆಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು.
ತನ್ನ ಸ್ನೇಹಿತೆಯೊಂದಿಗೆ ಜಗಳವಾಡಿಕೊಂಡಿದ್ದ ಇದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಸ್ನೇಹಿತೆಯ ಸಾವಿಗೆ ದಿಗ್ಬ್ರಾಂತನಾಗಿದ್ದ ದೇವೇಂದ್ರ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾನೆ.
ಯುವಕನ ಮೃತದೇಹ ಹೀರಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೈಲ್ವೆ ಹಳಿ ಮೇಲೆ ಪತ್ತೆಯಾಗಿದ್ದು, ಕುಟುಂಬ ವರ್ಗದವರಿಗೆ ಶವವನ್ನು ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವೇಂದ್ರ ತನ್ನ ಸ್ನೇಹಿತೆಯನ್ನು ಪ್ರೀತಿಸುತ್ತಿದ್ದನು. ಆದರೆ ಆಕೆಗೆ ಮತ್ತೊಬ್ಬನೊಂದಿಗೆ ಸಂಬಂಧವಿತ್ತು. ಈ ಕಾರಣಕ್ಕೆ ಇವರಿಬ್ಬರ ನಡುವೆ ಜಗಳವಾಗಿತ್ತು. ಈ ಜಗಳ ಆಕೆಯ ಸಾವಿನೊಂದಿಗೆ ಅಂತ್ಯಗೊಂಡಿತ್ತು ಎಂದು ಹೇಳಲಾಗಿದೆ.