- Advertisement -
- Advertisement -
ಮಡಿಕೇರಿ: ಕಗ್ಗೋಡ್ಲುವಿನ ಕಾಫಿ ಎಸ್ಟೇಟ್ ಒಳಭಾಗದಲ್ಲಿ ಹಸುವನ್ನು ಗುಂಡಿಕ್ಕಿ ಕೊಂದು ಮಾಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ನಾಪೋಕ್ಲು ಕೊಳಕೇರಿ ಗ್ರಾಮದ ಆಶಿಕ್(26) ಎಂಬಾತನೇ ಬಂಧಿತ ಆರೋಪಿ. ಇತರ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆದಿದೆ.
ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದ ಸಂದರ್ಭ ಒಂದು ಕಾರು ಕೂಡ ಪತ್ತೆಯಾಗಿದ್ದು, ಅದರ ಬಗ್ಗೆಯೂ ತನಿಖೆ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -