Thursday, May 2, 2024
spot_imgspot_img
spot_imgspot_img

ಕೆಎಸ್‌ಆರ್‌ಟಿಸಿ ಬಸ್ಸನ್ನು ಅಟ್ಟಾಡಿಸಿಕೊಂಡು ಬಂದ ಆನೆ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

- Advertisement -G L Acharya panikkar
- Advertisement -

ಮಡಿಕೇರಿ: ಕಾಡಾನೆಯೊಂದು ಕೆಎಸ್‌ಆರ್‌ಟಿಸಿ ಬಸ್ ಅನ್ನು ಅಡ್ಡಗಟ್ಟಿ ಅಟ್ಟಿಸಿಕೊಂಡು ಬಂದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ದೆವರಪುರದಲ್ಲಿ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಗ್ಗೆ ಘಟನೆ ನಡೆದಿದೆ. ಪ್ರಯಾಣಿಕರೋರ್ವರ ಮೊಬೈಲ್​ನಲ್ಲಿ ಕಾಡಾನೆ ಕೆಎಸ್‌ಆರ್‌ಟಿಸಿ ಬಸ್ ಅನ್ನು ಅಟ್ಟಿಸಿಕೊಂಡು ಬಂದ ದೃಶ್ಯ ಸೆರೆಯಾಗಿದೆ.

ದೃಶ್ಯದಲ್ಲಿ ಕಂಡಂತೆ ಕಾಡಾನೆ ರಸ್ತೆ ದಾಟುತ್ತಿದ್ದರಿಂದ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ ನಿಲ್ಲಿಸಿದ್ದಾನೆ. ಆದರೆ ಈ ವೇಳೆ ಆನೆ ಬಸ್ ಬಳಿಗೆ ಓಡೋಡಿ ಬಂದಿದೆ. ಇದರಿಂದ ಗಾಬರಿಗೆ ಒಳಗಾದ ಚಾಲಕ ಮತ್ತು ಪ್ರಯಾಣಿಕರು ಒಂದು ಬಾರಿ ಸ್ತಬ್ಧರಾಗಿದ್ದಾರೆ.

- Advertisement -

Related news

error: Content is protected !!