Tuesday, April 16, 2024
spot_imgspot_img
spot_imgspot_img

ಕಾಫಿತೋಟದಲ್ಲಿ ವಿದ್ಯುತ್ ಶಾಕ್‌ ತಗುಲಿ ಯುವಕ ಸಾವು !!

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಕಾಫಿತೋಟದಲ್ಲಿ ಕಾಳು ಮೆಣಸು ಕೊಯ್ಯುವಾಗ ಏಣಿಗೆ ವಿದ್ಯುತ್ ತಗುಲಿ ಶಾಕ್‌ನಿಂದ ಯುವಕನೋರ್ವ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮದ ಸಮೀಪ ಉರ್ವಿನ್ ಖಾನ್ ಎಸ್ಟೇಟ್‍ನಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ವ್ಯಕ್ತಿಯನ್ನು ಮಧ್ಯ ಪ್ರದೇಶ ಮೂಲದ 21 ವರ್ಷದ ಯುವಕ ವಿನೋದ್ ಎಂದು ಗುರುತಿಸಲಾಗಿದೆ. ಒಂದು ಬಳ್ಳಿಯಿಂದ ಕಾಳುಮೆಣಸು ಕೊಯ್ದು ಇನ್ನೊಂದು ಮರದ ಬಳಿ ಅಲ್ಯೂಮಿನಿಯಂ ಏಣಿ ಕೊಂಡೊಯ್ಯುವಾಗ ತೋಟದೊಳಗೆ ಹೋಗಿರುವ ವಿದ್ಯುತ್ ತಂತಿಗೆ ಏಣಿ ತಾಗಿದೆ.ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಯುವಕ ವಿನೋದ್ ಸಾವನ್ನಪ್ಪಿದ್ದಾನೆ.

ವಿದ್ಯುತ್ ಶಾಕ್‍ಗೆ ಒಳಗಾದ ವಿನೋದ್ ನನ್ನು ಕೂಡಲೇ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದಾರದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾನೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!