ತುಮಕೂರು: ಕನ್ನಡ ಕಲಿಸು ಎಂದು ಹೇಳಿ 13 ವರ್ಷದ ಬಾಲಕನೊಬ್ಬನಿಗೆ ಉತ್ತರ ಪ್ರದೇಶ ಮೂಲದ ಮದರಸಾ ಶಿಕ್ಷಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ಈ ಬಗ್ಗೆ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು 11 ವರ್ಷಗಳ ಶಿಕ್ಷೆ ವಿಧಿಸಿದೆ. ಜತೆಗೆ ಸಂತ್ರಸ್ತ ಬಾಲಕನಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ಉತ್ತರ ಪ್ರದೇಶ ಮೂಲದ ಮಫ್ತಿ ಮುಷರಫ್ (42) ಎಂಬ ವಿಕೃತಕಾಮಿಗೆ ಈ ಶಿಕ್ಷೆ ವಿಧಿಸಲಾಗಿದೆ. ಈತ ತುಮಕೂರಿನ ಅಮಲಾಪುರದ ಮದರಸಾದಲ್ಲಿ ಶಿಕ್ಷಕನಾಗಿದ್ದ. ರೈಲ್ವೆ ಟಿಕೆಟ್ ಬುಕಿಂಗ್ ಮಾಡಬೇಕು. ಕನ್ನಡ ಅರ್ಥವಾಗುವುದಿಲ್ಲ, ಕನ್ನಡ ಹೇಳಿಕೊಡು ಎಂದು ಹೇಳಿದ್ದ ಈ ಕಾಮಿ, ನಂತರ ಬಾಲಕನನ್ನು ಕರೆದುಕೊಂಡು ಹೋಗಿದ್ದಾನೆ.
ಇದನ್ನೂ ಓದಿ: ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; ಇಬ್ಬರ ಬಂಧನ
ನಗರದ ರೈಲ್ವೆ ನಿಲ್ದಾಣದ ಲಾಡ್ಜ್ನಲ್ಲಿ ಆತನನ್ನು ಇರಿಸಿದ್ದ. ಬೈಕ್ನಲ್ಲಿ ಪೆಟ್ರೋಲ್ ಖಾಲಿಯಾಗಿದ್ದು, ಹೋಗಲು ಆಗುವುದಿಲ್ಲ, ಸದ್ಯ ಲಾಡ್ಜ್ನಲ್ಲಿ ಉಳಿಯೋಣ ಎಂದು ಅವನನ್ನು ಉಳಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದ. ಮರುದಿನ ಬಾಲಕನನ್ನು ಹಾಸ್ಟೆಲ್ನಲ್ಲಿ ಬಿಟ್ಟು ಇದರ ಬಗ್ಗೆ ಮಾತನಾಡದಂತೆ ಬೆದರಿಕೆ ಹಾಕಿದ್ದ.
ಇದರಿಂದ ಹೆದರಿದ್ದ ಬಾಲಕ ತನ್ನ ತಾಯಿಗೆ ವಿಷಯ ತಿಳಿಸಿದ್ದ. ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಆರು ವರ್ಷಗಳ ವಿಚಾರಣೆ ಬಳಿಕ ಇದೀಗ ಕೋರ್ಟ್ ತೀರ್ಪು ನೀಡಿದೆ. ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎನ್.ಕೃಷ್ಣಯ್ಯ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.