Sunday, June 29, 2025
spot_imgspot_img
spot_imgspot_img

ಮಲ್ಪೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

- Advertisement -
- Advertisement -

ಮಲ್ಪೆ: ಜ್ಯುವೆಲ್ಲರಿ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಡಾನಿಡಿಯೂರು ಗ್ರಾಮದ ರಮೇಶ ಶೇರಿಗಾರ್(37) ಎಂದು ಗುರುತಿಸಲಾಗಿದೆ.

ಉಡುಪಿಯ ಆಭರಣ ಜುವೆಲ್ಲರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಜ.12ರಂದು ರಾತ್ರಿ ಮನೆಯಲ್ಲಿ ನನಗೆ ಹೆದರಿಕೆ ಆಗುತ್ತದೆ, ಈಗ ಬರುತ್ತೇನೆಂದು ಹೇಳಿ ತನ್ನ ಮೊಬೈಲ್‌ನ್ನು ತಂಗಿಗೆ ನೀಡಿ ಮನೆಯಿಂದ ಹೋಗಿದ್ದರು.

ಬಳಿಕ ರಮೇಶ್‌ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಜ.14ರಂದು ಸಂಜೆ 7 ಗಂಟೆಗೆ ಸುಮಾರಿಗೆ ಗರಡಿಮಜಲು ದೇವಿಕಟ್ಟೆಯ ಹಿಂಬದಿಯ ತೋಟದಲ್ಲಿರುವ ಬಾವಿಯ ಒಳಗೆ ರಮೇಶ ಅವರ ಮೃತದೇಹವು ಪತ್ತೆಯಾಗಿದೆ. ಇವರು ಮಾನಸಿಕ ಖಿನ್ನತೆಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ರಾತ್ರಿ ವೇಳೆಯೇ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ಈಶ್ವರ್ ಮಲ್ಪೆ ಮೇಲಕ್ಕೆತ್ತಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಸಾಗಿಸಲು ಸಹಕರಿಸಿದರು.

- Advertisement -

Related news

error: Content is protected !!