- Advertisement -
- Advertisement -





ಮಲ್ಪೆ: ತೊಟ್ಟಂ ಬಳಿ ಇಂದು ಬೆಳಗ್ಗೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಅಬ್ಬರದ ಅಲೆಗಳಿಗೆ ಮಗುಚಿ ಬಿದ್ದಿದ್ದು ಅದರಲ್ಲಿದ್ದ ನಾಲ್ವರು ಮೀನುಗಾರರು ಅಪಾಯದಿಂದ ಪಾರಾಗಿರುವ ಬಗ್ಗೆ ವರದಿಯಾಗಿದೆ.
ಸ್ಥಳೀಯರಾದ ಜೀವನ್ ಎಂಬವರ ದೋಣಿಯಲ್ಲಿ ನಾಲ್ವರ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ದೋಣಿಯು ಅಲೆಗಳಿಗೆ ಸಿಲುಕಿ ಸಮುದ್ರದಲ್ಲಿ ಮಗುಚಿತ್ತೆನ್ನಲಾಗಿದೆ. ಈ ಬಗ್ಗೆ ಸ್ಥಳೀಯರು ಮುಳುಗು ತಜ್ಞ ಈಶ್ವರ ಮಲ್ಪೆ ತಂಡಕ್ಕೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ತಂಡವು ಮೀನುಗಾರರಾದ ಪ್ರವೀಣ್ ಹಾಗೂ ಉದಯ್ ಜೊತೆಯಾಗಿ ನೀರಿಗೆ ಇಳಿದು ಅಪಾಯದಲ್ಲಿದ್ದ ನಾಲ್ವರಿಗೆ ಲೈಫ್ ಜಾಕೆಟ್ ನೀಡಿ ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದು ಮೀನುಗಾರಿಕೆಗೆ ತೆರಳುವ ಮೀನುಗಾರರು ಕಡ್ಡಾಯವಾಗಿ ಲೈಫ್ ಜಾಕೆಟ್ ಧರಿಸಬೇಕಾಗಿ ಈಶ್ವರ ಮಲ್ಪೆ ತಂಡ ಮೀನುಗಾರರಲ್ಲಿ ಮನವಿ ಮಾಡಿದೆ.
- Advertisement -








