Saturday, June 28, 2025
spot_imgspot_img
spot_imgspot_img

ಪಣಂಬೂರು: ಬಬ್ಬು ಸ್ವಾಮಿದೈವಸ್ಥಾನ ಪ್ರಾಂಗಣದಲ್ಲಿ ವ್ಯಕ್ತಿ ಆತ್ಮಹತ್ಯೆ

- Advertisement -
- Advertisement -

ಪಣಂಬೂರು: ದೈವಸ್ಥಾನ ಪ್ರಾಂಗಣದಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಣಂಬೂರು ಸಮೀಪದ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ನಡೆದಿದೆ.

ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಸಮೀಪದ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.

ಗೋಪಾಲ ಅವರು ಮಡಿಕೇರಿಯಿಂದ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!