- Advertisement -
- Advertisement -
ವಿಜಯಪುರ: ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ವ್ಯಕ್ತಿಯೊಬ್ಬ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರದಲ್ಲಿ ನಡೆದಿದೆ. 55 ವರ್ಷದ ವ್ಯಕ್ತಿ ಸಲೀಂ ತಿಕೋಟ್ಕರ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಆತ ಎಲ್ಲರೊಂದಿಗೆ ಗೋಲ ಗುಮ್ಮಟ ವೀಕ್ಷಣೆಗೆ ಸಾಲಿನಲ್ಲಿ ನಿಂತು ಸಾಗುತ್ತಿದ್ದ. ಆದರೆ ಮೇಲಿನ ಅಂತಸ್ತಿಗೆ ಹೋಗುತ್ತಿದ್ದಂತೆಯೇ ಅಲ್ಲಿಂದ ಆವರಣದ ಭಾಗಕ್ಕೆ ಹಾರಿದ್ದಾನೆ. ನೆಲಕ್ಕೆ ಬಿದ್ದು ಗಾಯಗೊಂಡ ಆತ ಅದೇ ಸ್ಥಳದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ.
ಘಟನೆಯು ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಲೀಂ ಆತ್ಮಹತ್ಯೆ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
- Advertisement -