Sunday, June 29, 2025
spot_imgspot_img
spot_imgspot_img

ಕಾರ್ಕಳ: ಆಕಸ್ಮಿಕವಾಗಿ ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು

- Advertisement -
- Advertisement -

ಕಾರ್ಕಳ,: ತೆಂಗಿನ ಮರದಿಂದ ಕಾಯಿ ಕೀಳುವಾಗ ಅಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ಶ್ರೀದೇವಿ ಕಾಲೋನಿ ಬಳಿ ನಡೆದಿದೆ.

ಕುಕ್ಕುಂದೂರು ದುರ್ಗಾಪರಮೇಶ್ವರಿ ದೇವಸ್ಥಾನದ ಹತ್ತಿರದ ನಿವಾಸಿ ಶಂಕರ (50) ಮೃತರು.

ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಜೂ.19ರಂದು ಲೋಹಿತ್ ಎಂಬವರ ಮನೆಯ ಬಳಿಯ ತೆಂಗಿನ ಮರದಿಂದ ತೆಂಗಿನಕಾಯಿ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಬಿದ್ದರು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಜೂ.21ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!