Saturday, June 28, 2025
spot_imgspot_img
spot_imgspot_img

ಪುತ್ತೂರಿನ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು

- Advertisement -
- Advertisement -

ಪುತ್ತೂರು : ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪರ್ಲಡ್ಕ ನಿವಾಸಿ ಅಬ್ದಲ್ಲಾ ಹಾಜಿ ಅವರ ಪುತ್ರ ಹಾರಿಸ್ ದರ್ಬೆ( 43) ಮೃತ ದುರ್ದೈವಿ. ಹಾರಿಸ್ ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಪ್ರಸ್ತುತ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಉದ್ಯಮಿಯಾಗಿದ್ದರು. ಹಲವಾರು ಸಂಘಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ಹಾರಿಸ್ ಅವರು ಸಮಾಜ ಸೇವಕರಾಗಿ ಕೂಡ ಕೆಲಸ ಮಾಡುತ್ತಿದ್ದರು.

ಕುಂಬ್ರದ ಕರ್ನಾಟಕ ಇಸ್ಲಾಮಿಕ್ ಅಕಾಡಮಿ ಇದರ ಸೌದಿ ವಿಭಾಗದಲ್ಲಿ ಸಕ್ರಿಯ ನೇತೃತ್ವ ವಹಿಸಿದ್ದರು ಎನ್ನಲಾಗಿದೆ. ಜುಬೈಲ್ ನಲ್ಲಿ ಮೃತಪಟ್ಟಿದ್ದ ಹಾರಿಸ್ ನ ಸುದ್ದಿ ತಿಳಿದ ಕುಟುಂಬಸ್ಥರಲ್ಲಿ ಅಕ್ರಂದನ ಮುಗಿಲೇರಿದೆ. ಮೃತರು ತಂದೆ- ತಾಯಿ, ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!