ಮಂಗಳೂರು: ಸೋಮವಾರ ಮುಂಜಾನೆಯಿಂದ ನೌಕಾ ಪಡೆಯ ಹೆಲಿಕಾಪ್ಟರ್ ಕಾರ್ಯಾಚರಣೆ ಆರಂಭಿಸಿದ್ದು, ಟಗ್ನಲ್ಲಿ ಸಿಲುಕಿದ್ದ 9 ಜನರನ್ನು ರಕ್ಷಿಸಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಕಮಾಂಡರ್ ಎಸ್.ಬಿ. ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆಯಿಂದಲೇ ಕಾರ್ಯಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸಂಸದ ನಳಿನ್ಕುಮಾರ್ ಕಟೀಲ್, ಜಿಲ್ಲಾ ಉಸ್ತವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹಾಗೂ ಕರಾವಳಿ ಕಾವಲು ಪಡೆ ಕಮಾಂಡರ್ ಎಸ್.ಬಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ, ಚರ್ಚಿಸಿದರು.


ಸಮುದ್ರದ ಪ್ರಕ್ಷುಬ್ಧತೆಯಿಂದ ಕಾಪು ಲೈಟ್ಹೌಸ್ನಿಂದ ಸುಮಾರು ಐದು ನಾಟಿಕಲ್ ಮೈಲಿ ದೂರದಲ್ಲಿ ಬಂಡೆಗಳ ನಡುವೆ ಟಗ್ ಸಿಲುಕಿಕೊಂಡಿತ್ತು. ಕಾರ್ಯಾಚರಣೆಗೂ ಮುನ್ನ ಸಂಸದರು, ಸಚಿವರು, ಜಿಲ್ಲಾಧಿಕಾರಿ ಹಾಗೂ ಕರಾವಳಿ ಕಾವಲು ಪಡೆಯ ಅಧಿಕಾರಿಗಳ ಸಭೆ ನಡೆಯಿತು.


ಸಮುದ್ರದ ಪ್ರಕ್ಷುಬ್ಧತೆಯಿಂದ ಕಾಪು ಲೈಟ್ ಹೌಸ್ ನಿಂದ ಸುಮಾರು ಐದು ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿದ್ದ ಮಂಗಳೂರಿನ MRPL ಕಂಪನಿಗೆ ಆಗಮಿಸುವ Cruid Oil ಅಂಡರ್ ಗ್ರೌಂಡ್ ಪೈಪ್ ಕನೆಕ್ಟ್ ಮಾಡುವ ಗುತ್ತಿಗೆ ಪಡೆದಿರುವ K E I – RSOR ಕಂಪನಿಯ ಕೋರಮಂಡಲ ಸಪೋರ್ಟರ್-9 ಎಂಬ ಹೆಸರಿನ Vessel ನಲ್ಲಿರುವ ಜನರನ್ನು ಏರ್ ಲಿಫ್ಟ್ ಮೂಲಕ ಕೋಸ್ಟ್ ಗಾರ್ಡ್ ನವರು ರಕ್ಷಿಸಿದರು. ಅವರನ್ನು ಪಣಂಬೂರಿನ ನವಮಂಗಳೂರು ಬಂದರು ಆಸ್ಪತ್ರೆಗೆ ಕರೆತರಲಾದ ಸಂದರ್ಭ ಸಂಸದ ನಳಿನ್ ಕುಮಾರ್,ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.


