Tuesday, May 7, 2024
spot_imgspot_img
spot_imgspot_img

ಮಂಗಳೂರು: ಲಂಚ ಪಡೆದು ಆದಾಯ ಸಂಪಾದನೆ; ಮಂಗಳೂರು ಪಾಲಿಕೆ ಅಧಿಕಾರಿ ಅಂದರ್

- Advertisement -G L Acharya panikkar
- Advertisement -

ಮ0ಗಳೂರು : ಲಂಚದಿ0ದ ಅತೀಯಾದ ಆದಾಯ ಸಂಪಾದನೆ ಮಾಡಿದ ಮಂಗಳೂರು ಮಹಾನಗರಪಾಲಿಕೆ ಅಧಿಕಾರಿಯ ಮೇಲಿನ ಆರೋಪ ಸಾಭೀತಾಗಿದ್ದು, 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ ಅಪರಾಧಿಗೆ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿದೆ. ಶಿಕ್ಷೆಗೊಳಗಾದ ಅಪರಾಧಿಯನ್ನು ಮಂಗಳೂರು ಮಹಾನಗರಪಾಲಿಕೆ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿ (50) ಎನ್ನಲಾಗಿದೆ.

ಮಂಜುನಾಥ ಸ್ವಾಮಿಯನ್ನು ಆದಾಯಕ್ಕಿಂತ ಹೆಚ್ಚು ಸಂಪಾದನೆ ಮಾಡಿದ್ದಾರೆಂಬ ಆಪಾದನೆ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರು 2007 ರಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನಲೆ ಸಮಗ್ರ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ಅಂತಿಮ ತೀರ್ಪು ನೀಡಲಾಗಿದೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1 ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!