Sunday, May 5, 2024
spot_imgspot_img
spot_imgspot_img

ಇಂದು ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

- Advertisement -G L Acharya panikkar
- Advertisement -

ಬೆಂಗಳೂರು: ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಕರಾವಳಿ, ಮಲೆನಾಡು ಸೇರಿದಂತೆ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದು ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮಧ್ಯಾಹ್ನದ ವೇಳೆಗೆ ಮಳೆ ಜೋರಾಗಿ ಸುರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೇ. 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರ, ಹಾವೇರಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಮೇ.19 ರಿಂದ ಮೇ.21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

Related news

error: Content is protected !!