Friday, June 27, 2025
spot_imgspot_img
spot_imgspot_img

ಮಂಗಳೂರು: ಕರಾವಳಿಗರಿಂದ ವೀಕೆಂಡ್ ಕರ್ಫ್ಯೂಗೆ ಉತ್ತಮ ಬೆಂಬಲ!

- Advertisement -
- Advertisement -

ಮಂಗಳೂರು: ವಿಕೇಂಡ್ ಕರ್ಪ್ಯೂಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಪ್ರಮುಖ ರಸ್ತೆಗಳು ಖಾಲಿ ಖಾಲಿಯಾಗಿದ್ದು ನಗರದಾದ್ಯಂತ ಪೋಲಿಸರು ಬ್ಯಾರಿಕೇಡ್ ಹಾಕಿ ಬೀಗಿ ಬಂದೊಬಸ್ತ್ ಮಾಡಿದ್ದಾರೆ. ಅಗತ್ಯ ಸೇವೆ ಹೊರತುಪಡಿಸಿದರೆ ಉಳಿದ ಎಲ್ಲಾ ಸೇವೆಗಳು ಬಂದ್ ಆಗಿದ್ದು,ಕರಾವಳಿಗರು ವಿಕೇಂಡ್ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ವೀಕೆಂಡ್‌ ಕರ್ಫ್ಯೂ ಶುಕ್ರವಾರ ರಾತ್ರಿಯಿಂದಲೇ ಆರಂಭವಾಗಿದೆ. ಶನಿವಾರ ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಹಾಲು, ತರಕಾರಿ ಮುಂತಾದ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, ಬಳಿಕ ಎಲ್ಲವೂ ಬಂದ್‌ ಆಗಿವೆ.

driving

ಬೆಳಿಗ್ಗೆ ನಗರದ ಸೆಂಟ್ರಲ್‌ ಮಾರುಕಟ್ಟೆ ಸೇರಿದಂತೆ ಸೂಪರ್‌ ಮಾರುಕಟ್ಟೆಗಳು ತೆರೆದಿದ್ದು, ಬೆರಳೆಣಿಕೆಯ ಜನ ಇದ್ದರು. ಇನ್ನು ನಗರದ ಸ್ಟೇಟ್‌‌ ಬ್ಯಾಂಕ್‌‌ ಬಳಿಯ ಮೀನು ಮಾರುಕಟ್ಟೆ ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿತ್ತು.
ವೀಕೆಂಡ್‌ ಕರ್ಫ್ಯೂ ಸಂದರ್ಭ ಅನಗತ್ಯವಾದ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಹಣ್ಣು, ತರಕಾರಿ ಖರೀದಿ, ಪತ್ರಿಕೆ ಮಾರಾಟ ಹಾಗೂ ಪತ್ರಿಕೆ ಮಾರಾಟ ಹಾಗೂ ಹೊಟೇಲ್‌‌ ಪಾರ್ಸೆಲ್‌ ಸೇವೆಗೆ ಅವಕಾಶವಿದೆ.

10 ಗಂಟೆಯ ಬಳಿಕ ಜಿಲ್ಲೆಯಾದ್ಯಂತ ಅಗತ್ಯ ಸಂಚಾರ ಹೊರತುಪಡಿಸಿ ಉಳಿದಂತೆ ಎಲ್ಲಾ ಬಂದ್‌ ಆಗಿವೆ. ನಗರದ ಹಲವೆಡೆ ಚೆಕ್ ಪೋಸ್ಟ್ ಮಾಡಲಾಗಿದ್ದು, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

Related news

error: Content is protected !!