- Advertisement -
- Advertisement -
ನಾಗಮಂಗಲ: ರಸ್ತೆ ಅಪಘಾತದಲ್ಲಿ ತಾಲ್ಲೂಕಿನ ಹೊಣಕೆರೆ ಹೋಬಳಿ ಜೋಡಿನೇರಲಕೆರೆ ಗ್ರಾಮದ ಪತ್ರಕರ್ತ ಹರೀಶ್ ಸಾವಿಗೀಡಾಗಿದ್ದಾರೆ.
ಪಟ್ಟಣದಿಂದ ಸ್ವಗ್ರಾಮ ಜೋಡಿನೇರಲಕೆರೆಗೆ ಗುರುವಾರ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುವಾಗ ವಾಹನ ಸ್ಕಿಡ್ ಆಗಿ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಕೂಡಲೇ ಅವರನ್ನು ಪಟ್ಟಣದ ಸಾರ್ವಜನಿಕ ಅಸ್ಪತ್ರೆ ನಂತರ ಬಿ.ಜಿ.ನಗರದ ಆದಿಚುಂಚನಗಿರಿ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸುಯೋಗ್ ಅಸ್ಪತ್ರೆಗೆ ಸಾಗಿಸಲಾಗಿತ್ತು.
ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗಿನ ಜಾವ ನಿಧನರಾದರು. ಹರೀಶ್ (30) ಕನ್ನಡಪ್ರಭ ಪತ್ರಿಕೆಯ ಮೂಲಕ ಪತ್ರಕರ್ತರಾಗಿ ಕಾರ್ಯಾರಂಭ ಮಾಡಿದ್ದರು. ನಂತರ ಪ್ರಜಾವಾಣಿ, ವಿಜಯವಾಣಿ ಪತ್ರಿಕೆಗೆ ವರದಿಗಾರರಾಗಿ ತದನಂತರ ಸ್ಥಳೀಯ ಪತ್ರಿಕೆಗಳಿಗೆ ವರದಿ ಮಾಡುತ್ತಿದ್ದರು. ಹರೀಶ್ ತಾಯಿ, ತಂದೆ, ಸಹೋದರ ಮತ್ತು ಸಹೋದರಿಯನ್ನು ಆಗಲಿದ್ದಾರೆ.
- Advertisement -