Sunday, June 29, 2025
spot_imgspot_img
spot_imgspot_img

ಮಂಗಳೂರು: ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ಏಕಕಾಲದಲ್ಲಿ 4 ಮದುವೆ; ಅಧಿಕಾರಿಗಳಿಂದ ದಾಳಿ

- Advertisement -
- Advertisement -

ಮಂಗಳೂರು: ಲಾಕ್ ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ ಏರ್ಪಡಿಸಿದ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸರಕಾರದ ಮಾರ್ಗಸೂಚಿ ಗಾಳಿಗೆ ತೂರಿ ಮದುವೆ ಸಮಾರಂಭ ಏರ್ಪಡಿಸಿದ್ದಾರೆ. ಈ ಹಿನ್ನಲೆ ಎಸಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ ಕೇಸು ದಾಖಲಿಸಿಕೊಂಡಿದೆ.

ಮಂಗಳೂರಿನ ಮಂಗಳಾದೇವಿ ದೇವಾಲಯದ ಆವರಣದಲ್ಲಿ ಮದುವೆಯನ್ನು ಏರ್ಪಾಡು ಮಾಡಲಾಗಿತ್ತು.
ಕೊರೊನಾ ಮಾರ್ಗಸೂಚಿ ಗಾಳಿಗೆ ತೂರಿದ್ದಾರೆ. ಏಕಕಾಲದಲ್ಲಿ 4 ಮದುವೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿಯ ನಾಮನಿರ್ದೇಶಿತ ಕಾರ್ಪೋರೇಟರ್ ಭಾಸ್ಕರ್ ಚಂದ್ರ ಅವರ ಪುತ್ರಿಯ ಮದುವೆ ಸೇರಿದಂತೆ ಇನ್ನೂ ಮೂರು ವಿವಾಹಗಳು ನಡೆಯುತ್ತಿದ್ದವು ಎನ್ನಲಾಗಿದೆ. ಮದುವೆಯಲ್ಲಿ ನೂರಕ್ಕೂ ಅಧಿಕ ಮಂದಿ ಗುಂಪುಗೂಡಿದ್ದಾರೆ.

ದೇವಾಲಯದ ಹೊರಗೆ ನಿಂತಿರುವ 40 ಕ್ಕೂ ಹೆಚ್ಚು ಕಾರುಗಳು ನಿಂತಿದ್ದು ದೂರು ಬಂದ ಹಿನ್ನಲೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಬೇಜವಾಬ್ದಾರಿಯಿಂದ ನಡೆದು ಕೊಳ್ಳುತ್ತಿರುವ ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!