Sunday, April 28, 2024
spot_imgspot_img
spot_imgspot_img

ಕರಾವಳಿಯ ಮೂವರು ಶಾಸಕರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ!

- Advertisement -G L Acharya panikkar
- Advertisement -

ಮಂಗಳೂರು: ನೂತನ ಸಚಿವ ಸಂಪುಟದಲ್ಲಿ ಕರಾವಳಿಯ 3 ಮಂದಿ ಶಾಸಕರಿಗೆ ಸಚಿವ ಸ್ಥಾನ ಒಲಿದಿದೆ. ಸಿಎಂ ಕಚೇರಿಯಿಂದ ಕರಾವಳಿಯ 3 ಶಾಸಕರಿಗೂ ದೂರವಾಣಿ ಕರೆ ಬಂದಿದ್ದು, ಮೂವರೂ ಪ್ರಮಾಣವಚನಕ್ಕೆ ಬೆಂಗಳೂರಿಗೆ ತೆರಳಿದ್ದಾರೆ. ಇಂದು ಮಧ್ಯಾಹ್ನ 2.15ಕ್ಕೆ ಬೆಂಗಳೂರಿನ ರಾಜ್ಯಪಾಲರ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಸಚಿವ ಸಂಪುಟ ಸೇರುವ 29 ಮಂದಿ ಶಾಸಕರ ಅಂತಿಮ ಪಟ್ಟಿ ಇಲ್ಲಿದೆ

ಕರಾವಳಿಯ 3 ಶಾಸಕರಾದ ಸುಳ್ಯ ಶಾಸಕ ಎಸ್.ಅಂಗಾರ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಮುಜರಾಯಿ ಖಾತೆಯ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಸಿಎಂ ಕಚೇರಿಯಿಂದ ದೂರವಾಣಿ ಕರೆ ಬಂದಿದೆ. ಈ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 3 ಸಚಿವ ಸ್ಥಾನ ಸಿಕ್ಕಂತಾಗಿದೆ.

- Advertisement -

Related news

error: Content is protected !!